- Advertisement -
- Advertisement -
ಕುಂದಾಪುರ: ದೇವಸ್ಥಾನಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದ ವೇಳೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರವರ ಕಾರು ಅಪಘಾತಕ್ಕೀಡಾದ ಘಟನೆ ಕುಂದಪುರದ ಜಾಲಾಡಿ ಸಮೀಪ ರಾ.ಹೆದ್ದಾರಿಯಲ್ಲಿ ಸಂಭವಿಸಿದೆ.
ಪತ್ನಿಯೊಂದಿಗೆ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಕಾರಿನಲ್ಲಿ ವಾಪಾಸಾಗುವಾಗ ಏಕಾಏಕಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರಿಗೆ ಗಾಯಗಳಾಗಿದ್ದು ಆತನನ್ನ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದಂತೆ ಕಾರಿನ ಚಾಲಕ, ಕಾರಿನಲ್ಲಿದ್ದ ಕೃಷ್ಣಮೂರ್ತಿ ಮಂಜ ಮತ್ತವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -