- Advertisement -
- Advertisement -
ಬೆಳ್ತಂಗಡಿ: ಕಾರು-ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿ, ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾಯನಕೆರೆಯ ಕುಲಾಲ್ ಮಂದಿರದ ಬಳಿ ನಡೆದಿದೆ.
ಗಾಯಗೊಂಡವರನ್ನು ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕ ರವಿಶಂಕರ್ (30) ಎಂದು ಗುರುತಿಸಲಾಗಿದೆ. ರವಿಶಂಕರ್ ತನ್ನ ಪತ್ನಿಯೊಂದಿಗೆ ಉಜಿರೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು, ಪತ್ನಿಗೂ ಗಾಯವಾಗಿದೆ ಎನ್ನಲಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎ.ಜೆ ಆಸ್ಪತ್ರೆಗೆ ರವಾನಿಸಲಾಗಿದೆ.
- Advertisement -