- Advertisement -
- Advertisement -
ಕಡಬ: ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕಡಬದ ಐತ್ತೂರು ಸಮೀಪ ರಾಜ್ಯ ಹೆದ್ದಾರಿಯ ಕಲ್ಲಾಜೆ ತಿರುವಿನಲ್ಲಿ ನಡೆದಿದೆ.
ಈ ಅಪಘಾತದಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ಸಿಗೂ ಹಾನಿಯಾಗಿದೆ. ಅತೀಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಖಾಸಗಿ ಬಸ್ ಕುಂದಾಪುರ ಮೂಲದ್ದು ಎಂದು ತಿಳಿದು ಬಂದಿದ್ದು ಕಾರಿನ ವಿವರ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಎಸ್.ಐ ಆಂಜನೇಯ ರೆಡ್ಡಿ ನೇತೃತ್ವದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .
- Advertisement -