- Advertisement -
- Advertisement -
ಮಂಗಳೂರು: ಕಾರು ಡಿವೈಡರ್ ದಾಟಿ ಕಂಟೈನರ್ ಗೆ ಢಿಕ್ಕಿ ಹೊಡೆದು ಪರಿಣಾಮ ಓರ್ವ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ.
ಮಂಜೇಶ್ವರ ಕುಂಜತ್ತೂರು ನಿವಾಸಿ ಇಬ್ರಾಹಿಂ(32) ಮೃತ ಕಾರು ಚಾಲಕ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಕಾರಿನಲ್ಲಿ ಕುಂಜತ್ತೂರಿನಿಂದ ಬಿ.ಸಿ.ರೋಡ್ ಕಡೆಗೆ ತೆರಳುತ್ತಿದ್ದಾಗ ಕಾರಿನ ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಕಾರು ಡಿವೈಡರ್ ಮೇಲೆ ಪಾಸ್ ಆಗಿ ವಿರುದ್ಧ ದಿಕ್ಕಿನಿಂದ ಬಂದ ಕಂಟೈನರ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
- Advertisement -