Friday, May 17, 2024
Homeಕರಾವಳಿಪುತ್ತೂರು: ಕಾರು-ಸ್ಕೂಟರ್‌ ನಡುವೆ ಅಪಘಾತ: ಸ್ಕೂಟರ್‌ ಸವಾರ ಮೃತ್ಯು

ಪುತ್ತೂರು: ಕಾರು-ಸ್ಕೂಟರ್‌ ನಡುವೆ ಅಪಘಾತ: ಸ್ಕೂಟರ್‌ ಸವಾರ ಮೃತ್ಯು

spot_img
- Advertisement -
- Advertisement -

ಪುತ್ತೂರು: ಕಾರು ಹಾಗೂ ಆ್ಯಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಕಲ್ಲರ್ಪೆಯಲ್ಲಿ ಇಂದು(ಮಂಗಳವಾರ) ಬೆಳಿಗ್ಗೆ ನಡೆದಿದೆ.

ನೈತ್ತಾಡಿ ಮೂಲದ ನಿವಾಸಿಯಾಗಿರುವ ಇಸ್ಮಾಯಿಲ್ ಮೃತಪಟ್ಟವರು . ಅಡಿಕೆ ವ್ಯಾಪಾರಸ್ಥರಾಗಿದ್ದ ಇವರು, ಅಜ್ಜಿಕಟ್ಟೆ ಜಮಾತ್ ಕಮಿಟಿ ಸದಸ್ಯರೂ ಆಗಿದ್ದಾರೆ..

ಇಂದು(ಮಂಗಳವಾರ) ಬೆಳಿಗ್ಗೆ ಸುಮಾರು 7 ಗಂಟೆಯ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಸವಾರ ಗಂಭೀರ ಗಾಯಗೊಂಡಿದ್ದರು. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಹಾದಿಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಓರ್ವ ಪುತ್ರ, ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!