- Advertisement -
- Advertisement -
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಈಶ್ವರಮಂಗಲ ಹಾಗೂ ವಿಟ್ಲದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಈಶ್ವರಮಂಗಲ ಸಮೀಪದ ಬಂಟುಕಲ್ಲು ನಿವಾಸಿ ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿರುವ ದೇವಿಪ್ರಸಾದ್ ಶೆಟ್ಟಿ ಮತ್ತು ವಿಟ್ಲದ ಸುದರ್ಶನ್ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಊರಿಗೆ ಬರುತ್ತಿದ್ದ ವೇಳೆ ಚೆನ್ನರಾಯಪಟ್ಟಣದಲ್ಲಿ ಕಾರು ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
- Advertisement -