- Advertisement -
- Advertisement -
ವಿಟ್ಲ; ಮಣ್ಣು ತುಂಬಿದ ಲಾರಿ ಹಾಗೂ ಕಾರಿನ ನಡುವೆ ಅಪಘಾತವಾಗಿರುವ ಘಟನೆ ವಿಟ್ಲ ಸಮೀಪದ ಉಕ್ಕುಡ ಕನ್ಯಾನ ರಸ್ತೆಯಲ್ಲಿ ನಡೆದಿದೆ.
ಕನ್ಯಾನ ಕಡೆಯಿಂದ ಬರುತ್ತಿದ್ದ ಮಣ್ಣಿನ ಲಾರಿ ಕೇಪಳಗುಡ್ಡೆ ತಿರುವಿನಲ್ಲಿ ದೇಲಂತಬೆಟ್ಟು ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನ ಬಲ ಭಾಗ ಸಂಪೂರ್ಣ ಜಖಂಗೊಂಡಿದೆ. ದೇಲಂತಬೆಟ್ಟು ನಿವಾಸಿ ಅವಿಲ್ ಡಿಸೋಜ ಅವರಿಗೆ ಸೇರಿದ ಕಾರಾಗಿದ್ದು, ಕನ್ಯಾನ ಮೂಲಕ ಮಂಗಳೂರು ಕಛೇರಿಗೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -