- Advertisement -
- Advertisement -
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡ್ನಲ್ಲಿ ಮೂರು ಕಾರುಗಳ ನಡುವಿನ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮೊಗ್ರಾಲ್ ಪುತ್ತೂರಿನ ಜಗದೀಶ್ (30) ಬಾಲಕೃಷ್ಣ (50) ಮತ್ತು ಬದ್ರಿಯಾ ನಗರದ ಮುರ್ಷಿದ್ ( 22) ಗಾಯಗೊಂಡವರು.
ಕುಂಬಳೆ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರಿಗೆ ಎದುರಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದ್ದು, ಹಿಂದಿನಿಂದ ಬಂದ ವ್ಯಾಗನರ್ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -