- Advertisement -
- Advertisement -
ಉಡುಪಿ: ಸ್ಕೂಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನ ಕಾಲಿನ ಮೇಲೆ ಲಾರಿಯ ಚಕ್ರಗಳು ಹರಿದು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ರಾಷ್ಟ್ರೀಯ
ಹದಾರಿಯಲ್ಲಿ ನಡೆದಿದೆ.
ಸ್ಥಳೀಯ ವ್ಯಾಪಾರಿ ಚಂದಯ್ಯ ಅವರು ಗಂಭೀರ ಗಾಯಗೊಂಡ ವ್ಯಕ್ತಿ. ಲಾರಿಯ ಚಕ್ರ ಚಂದಯ್ಯರವರ ಎಡಗಾಲಿನ ಮೇಲೆ ಹರಿದಿದ್ದು, ಈ ವೇಳೆ ಕಾಲು ಅಪ್ಪಚ್ಚಿಯಾಗಿ ರಸ್ತೆಯಲ್ಲೆ ಕುಳಿತು ಬಿಟ್ಟಿದ್ದಾರೆ. ಗಾಯಾಳುವಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ನಿಂತಿದ್ದು ನಿರಂತರ ಅಪಘಾತ ಸಂಭವಿಸುತ್ತಿದೆ. ಈ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -