Saturday, May 4, 2024
Homeತಾಜಾ ಸುದ್ದಿಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

spot_img
- Advertisement -
- Advertisement -

ಮಂಡ್ಯ; ಕಾರು ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ‌ ಐವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನಾಗತಿಹಳ್ಳಿ ಬಳಿ ನಡೆದಿದೆ.ಮೃತರೆಲ್ಲರೂ ತಮಿಳುನಾಡು ಮೂಲದವರು ಎನ್ನಲಾಗಿದೆ.

ಬೆಂಗಳೂರಿನಲ್ಲಿ ಮದುವೆ ಸಮಾರಂಭ ಮುಗಿಸಿಕೊಂಡು ಹಾಸನ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಜಕ ಕ್ರಾಸ್ ಆಗಿ ಹಾಸನದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಎರಡು ಕಾರುಗಳಲ್ಲಿದ್ದ ಒಟ್ಟು ಐವರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -
spot_img

Latest News

error: Content is protected !!