- Advertisement -
- Advertisement -
ಉಳ್ಳಾಲ: ನಾಡದೋಣಿ ಮೀನುಗಾರರ ಬಲೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು 15 ಲಕ್ಷಕ್ಕೂ ಅಧಿಕ ನಷ್ಟವಾಗಿರೋ ಘಟನೆ ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಮೀನಿನ ಬಲೆಗಳು ಸುಟ್ಟು ಕರಕಲಾಗಿವೆ. ಘಟನೆಯಿಂದ ಬಡ ಮೀನುಗಾರರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿದ್ದಾರೆ. ಅಧಿಕಾರಿಗಳು ಬಡ ಮೀನುಗಾರರಿಗೆ ಶೀಘ್ರ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
- Advertisement -