- Advertisement -
- Advertisement -
ದಕ್ಷಿಣ ಕನ್ನಡ: ಸುಳ್ಯ, ಕಡಬ, ಬೆಳ್ತಂಗಡಿ, ಪುತ್ತೂರು ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚಿಸಿದ ವ್ಯಕ್ತಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.
ಕೇರಳದ ಕಾಸರಗೋಡಿನ ಮುಟ್ಟತೋಡಿ ನಿವಾಸಿ ಶ್ರೀನಾಥ್ ಎಂಬುವರು ಬಂಧಿತ ಆರೋಪಿ. ದಕ್ಷಿಣ ಕನ್ನಡ ಜಿಲ್ಲೆಯ 40 ಕ್ಕೂ ಹೆಚ್ಚು ಮಂದಿ ಉದ್ಯೋಗ ವಂಚನೆಯ ಆರೋಪದ ಮೇಲೆ ದೂರು ದಾಖಲಿಸಿದ್ರು.
ಹಲವಾರು ಜನರಿಂದ ಲಕ್ಷಗಟ್ಟಲೇ ಹಣ ವಸೂಲಿ ಮಾಡಿ ವಂಚಿಸಿದ ಆರೋಪಿಯೊಬ್ಬರನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಕೊಡಗು ಜಿಲ್ಲೆಯ ಚೆಂಬೂ ನಿವಾಸಿ ಜೇಮ್ಸ್ ಜೋಸೆಫ್ ಎಂಬುವರು ನೀಡಿದ ದೂರು ಆಧರಿಸಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ಬಂಧನವಾಗಿದೆ..
- Advertisement -