ಮಂಗಳೂರು: ವೈದ್ಯಕೀಯ ತಪಾಸಣೆಗಾಗಿ ಅಕ್ರಮ ಗೋ ಸಾಗಾಟ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಕರೆತಂದಿದ್ದಾಗ ಓರ್ವ ಆರೋಪಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ ಘಟನೆ ನಾಟೆಕಲ್ ಆರೋಗ್ಯ ಕೇಂದ್ರದ ಬಳಿ ನಡೆದಿದೆ. ಬಳಿಕ ಪೊಲೀಸ್ ಸಿಬ್ಬಂದಿ ಸಿನಿಮೀಯ ಶೈಲಿಯಲ್ಲಿ ಆತನನ್ನು ಹಿಡಿದಿದ್ದಾರೆ. ಮುಹಮ್ಮದ್ ಮುಸ್ತಫಾ ಪರಾರಿಯಾಗಲು ಯತ್ನಿಸಿದ ಆರೋಪಿ.
ಮಂಗಳೂರು: ವೈದ್ಯಕೀಯ ತಪಾಸಣೆಗಾಗಿ ಕಳವು ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಕರೆತಂದಿದ್ದಾಗ ಓರ್ವ ಆರೋಪಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ ಘಟನೆ ನಾಟೆಕಲ್ ಆರೋಗ್ಯ ಕೇಂದ್ರದ ಬಳಿ ನಡೆದಿದೆ. ಬಳಿಕ ಪೊಲೀಸ್ ಸಿಬ್ಬಂದಿ ಸಿನಿಮೀಯ ಶೈಲಿಯಲ್ಲಿ ಆತನನ್ನು ಹಿಡಿದಿದ್ದಾರೆ. ಮುಹಮ್ಮದ್ ಮುಸ್ತಫಾ ಪರಾರಿಯಾಗಲು ಯತ್ನಿಸಿದ ಆರೋಪಿ.
ಕೊಣಾಜೆ ಠಾಣೆ ಪೊಲೀಸ್ ಸಿಬ್ಬಂದಿ ಎಂ.ಬಿ ಅಸುಂಡಿ ಅವರು ಆರೋಪಿ ಮುಸ್ತಫಾನನ್ನ ಹಿಡಿದು ಕರ್ತವ್ಯ ಪ್ರಜ್ಞೆ ಮೆರೆದಿದ್ದು, ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇಂದು ಬೆಳಗ್ಗೆ ಚೇಳೂರು ಚೆಕ್ ಪೋಸ್ಟ್ ಬಳಿ ಪಿಎಸ್ಐ ಯೋಗೇಶ್ವರ್ ಮತ್ತು ಸಿಬ್ಬಂದಿ ಗಸ್ತಿನಲ್ಲಿದ್ದ ವೇಳೆ ಮೆಲ್ಕಾರ್ ನಿಂದ ಸಜಿಪ ಕಡೆಗೆ ಹೋಗುತ್ತಿದ್ದ ಕಾರೊಂದನ್ನು ತಡೆದಿದ್ದಾರೆ. ತಪಾಸಣೆ ನಡೆಸಿದಾಗ ಕಾರಿನಲ್ಲಿ ಒಂದು ದನದ ಕರುವನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಮುಂದಾದ ಪೊಲೀಸರು ಪಿ.ಸಿ.ಆರ್ ವಾಹನದಲ್ಲಿ ನಾಟೆಕಲ್ಲಿನ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗೆ ಕರೆ ತಂದಿದ್ದಾರೆ. ಈ ವೇಳೆ ಮುಸ್ತಫಾ ಎಂಬಾತ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ಗುಡ್ಡ ಹಾರಿ ತಪ್ಪಿಸಲು ಯತ್ನಿಸಿದ್ದು, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಎಂ.ಬಿ ಅಸುಂಡಿ ಬೆನ್ನಟ್ಟಿ ಆರೋಪಿಯನ್ನು ಹಿಡಿದಿದ್ದಾರೆ. ಘಟನೆಯಲ್ಲಿ ಅಸುಂಡಿ ಅವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.