Monday, June 8, 2026
Homeಕರಾವಳಿಉಡುಪಿಉಡುಪಿ;  ರೈಲ್ವೆ ಹಳಿಯ ಲಿಂಕಿಂಗ್ ಕಬ್ಬಿಣ ಕದ್ದಿದ್ದಾರೆಂದು ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ಆರೋಪ; ರೈಲ್ವೆ...

ಉಡುಪಿ;  ರೈಲ್ವೆ ಹಳಿಯ ಲಿಂಕಿಂಗ್ ಕಬ್ಬಿಣ ಕದ್ದಿದ್ದಾರೆಂದು ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ಆರೋಪ; ರೈಲ್ವೆ ಗ್ಯಾಂಗ್ ಮನ್ ಮೇಲೆ ಪ್ರಕರಣ ದಾಖಲು

- Advertisement -
- Advertisement -

ಉಡುಪಿ;  ರೈಲ್ವೆ ಹಳಿಯ ಲಿಂಕಿಂಗ್ ಕಬ್ಬಿಣ ಕದ್ದಿದ್ದಾರೆಂದು ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ ಆರೋಪದಡಿ ರೈಲ್ವೆ ಗ್ಯಾಂಗ್ ಮನ್ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ಪಡುಬಿದ್ರಿಯಲ್ಲಿ ನಡೆದದೆ.

ಪಲಿಮಾರು ಗ್ರಾಮದ ಅವರಾಲು ಮಟ್ಟು ರೈಲು ಹಳಿಯ ಸಮೀಪವಿದ್ದ ಕಬ್ಬಿಣದ ತುಂಡನ್ನು ಹೆಕ್ಕಿದರೆಂಬ ಕಾರಣಕ್ಕೆ ಅಪ್ರಾಪ್ತ ಬಾಲಕರಿಬ್ಬರ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಅದರ ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆರೋಪದಡಿ ಕೊಂಕಣ ರೈಲ್ವೇಯ ಗ್ಯಾಂಗ್‌ಮನ್‌ ಒಬ್ಬರ ವಿರುದ್ಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ. ಶನಿವಾರ ಘಟನೆ ನಡೆದಿದ್ದು, ಬಾಲಕನೊಬ್ಬನ ತಂದೆ ಹೆಜಮಾಡಿಯ ಅಬ್ದುಲ್‌ ಖಾದರ್‌ ಪೊಲೀಸರಿಗೆ ಭಾನುವಾರ ದೂರು ನೀಡಿದ್ದಾರೆ.

ಅವರಾಲು ಮಟ್ಟುವಿನಲ್ಲಿ ಬಾಲಕನ ಅಜ್ಜನ ಮನೆಯಿದ್ದು ಫೆ. 15ರಂದು ಮಧ್ಯಾಹ್ನದ ವೇಳೆಗೆ ಗೆಳೆಯನೊಂದಿಗೆ ಅಲ್ಲಿಗೆ ಹೋಗಿದ್ದ. ರೈಲು ಹಳಿಯ ಬಳಿ ಆಟವಾಡುತ್ತಿದ್ದಾಗ ಕಾಣಿಸಿದ ಕಬ್ಬಿಣದ ತುಂಡೊಂದನ್ನು ಆತ ಹೆಕ್ಕಿದ್ದನು. ಅದನ್ನು ಗಮನಿಸಿದ ರೈಲ್ವೇ ಗ್ಯಾಂಗ್‌ಮನ್‌ ಕೋಲಿನಿಂದ ಬಾಲಕನೊಬ್ಬನ ತಲೆಗೆ ಹಾಗೂ ಇನ್ನೋರ್ವನ ಎಡಗಾಲಿಗೆ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತನಿಖೆ ಮುಂದುವರಿದಿದೆ.


ರೈಲ್ವೆ ಆವರಣವು ರೈಲ್ವೆ ಇಲಾಖೆಯ ವ್ಯಾಪ್ತಿಗೆ ಒಳಪಡುವುದರಿಂದ, ಕೊಂಕಣ ರೈಲ್ವೆಯ ಕಾನೂನು ವಿಭಾಗವು ಸಲ್ಲಿಸುವ ವರದಿಯನ್ನು ಆಧರಿಸಿ ಅಪ್ರಾಪ್ತ ವಯಸ್ಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೆ ಅಪ್ರಾಪ್ತ ವಯಸ್ಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅನುಮತಿ ನೀಡಿದ ತಂದೆಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಪೊಲೀಸ್ ಇಲಾಖೆ ತಿಳಿಸಿದೆ.

- Advertisement -

Latest News

error: Content is protected !!