Sunday, May 5, 2024
Homeಕರಾವಳಿಮಂಗಳೂರು: ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ಆರೋಪ:  ದೂರು ದಾಖಲು

ಮಂಗಳೂರು: ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ಆರೋಪ:  ದೂರು ದಾಖಲು

spot_img
- Advertisement -
- Advertisement -

ಮಂಗಳೂರು: ಸಾಲು ಸಾಲು ಕೊಲೆ ಪ್ರಕರಣಗಳಿಂದ ಕರಾವಳಿಯಲ್ಲಿ ಶಾಂತಿ ಭಂಗ ಉಂಟಾಗಿರುವ ಈ ಪರಿಸ್ಥಿತಿಯಲ್ಲಿ ಇದೀಗ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಹಿಂದೂ ಮುಖಂಡರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಆಗಸ್ಟ್‌ 2 ರಂದು 5 ರಂದು ರಾತ್ರಿ ಹಿಂದೂ ಮುಖಂಡರೊಬ್ಬರು ಮನೆಗೆ ಬರುತ್ತಿದ್ದ ವೇಳೆ ಮಂಗಳೂರು ನಗರದ ಬಜ್ಜೋಡಿ- ಬಿಕರ್ನಕಟ್ಟೆ ರಸ್ತೆಯಲ್ಲಿ ಅವರ ಕಾರನ್ನು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಅಪರಿಚಿತರು ಹಿಂಬಾಲಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೇ ಆಗಸ್ಟ್‌7 ರಂದು ಕೂಡ ರಾತ್ರಿ ಸುಮಾರು 10.30 ರ ಸುಮಾರಿಗೆ ಪಂಪ್‌ವೆಲ್‌ ನಿಂದ ಮನೆಗೆ ಹೋಗುತ್ತಿದ್ದ ವೇಳೆ ಬಜ್ಜೋಡಿ ಬಿಕರ್ನಕಟ್ಟೆ ರಸ್ತೆಯಲ್ಲಿ ಅಪಾರ್ಟ್‌ಮೆಂಟ್‌ ಕಡೆಗೆ ಕಾರನ್ನು ತಿರುಗಿಸುವಷ್ಟರಲ್ಲಿ ಎದುರುಗಡೆಯಿಂದ ಹೆಲ್ಮೆಟ್‌ ಧರಿಸಿಕೊಂಡು ಬಂದ ಬೈಕ್‌ ಸವಾರರು ಬೈಕ್‌ನ್ನು ತನ್ನ ಕಾರಿಗೆ ತಾಗಿಸಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಳಿಕ ರಾತ್ರಿ 11 ಗಂಟೆ 43 ನಿಮಿಷರ ವೇಳೆಗೆ ವಾಟ್ಸಾಪ್ ಆಡಿಯೋ ಕಾಲ್ ಮಾಡಿರುವ ವ್ಯಕ್ತಿಯೊಬ್ಬ ಇಂಟರ್‌ನೆಟ್‌ ಕರೆ ಮಾಡಿರುವ ವ್ಯಕ್ತಿ ತುಳು ಮಿಶ್ರಿತ ಬ್ಯಾರಿ ಭಾಷೆಯಲ್ಲಿ ಮಾತನಾಡುತ್ತಾ ಬೆದರಿಕೆಯೊಡ್ಡಿದ್ದಾನೆ. ಇವತ್ತು ನೀನು ತಪ್ಪಿಸಿದ್ದಿ ಎಂದು ಖುಷಿ ಪಡಬೇಡ. ಗೊತ್ತಿದೆ, ಇನ್ನೂ ಮೂರು ಜನ ಪಂಪುವೆಲ್ ನಲ್ಲಿ ಇದ್ದಾರೆ. ನಾನು ಬಿಡುವುದಿಲ್ಲ, ಕೊಂದ ನೋವು ಇದೆ ಎಂದು ಬೆದರಿಕೆಯೊಡ್ಡಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾರೆ.

ಈ ಸಂಬಂಧ ಮಂಗಳೂರು ನಗರದ ಕಂಕನಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!