Sunday, June 29, 2025
Homeಕರಾವಳಿಮಂಗಳೂರುನೆಲ್ಯಾಡಿ; ಯುವಕನನ್ನು ಕೊಲೆಗೈದ ಆರೋಪಿಯ ಬಂಧನ

ನೆಲ್ಯಾಡಿ; ಯುವಕನನ್ನು ಕೊಲೆಗೈದ ಆರೋಪಿಯ ಬಂಧನ

spot_img
- Advertisement -
- Advertisement -

ನೆಲ್ಯಾಡಿ; ಯುವಕನನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ರಾತ್ರಿ, ಶರತ್‌ ಕುಮಾ‌ರ್ (34) ಎಂಬ ಯುವಕನನ್ನು ಮರದ ದೊಣ್ಣೆಯಿಂದ ಬಡಿದು ಬರ್ಬರವಾಗಿ ಕೊಲೆಗೈಯಲಾಗಿತ್ತು. ಈ ಭೀಕರ ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಹರಿಪ್ರಸಾದ್ ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಪೆರಿಯಶಾಂತಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಶರತ್ ಕುಮಾರ್ ತನ್ನ ಚಿಕ್ಕಪ್ಪನ ಮನೆಯವರೊಂದಿಗೆ ವಾಗ್ವಾದದಲ್ಲಿ ತೊಡಗಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿ, ಆರೋಪಿ ಹರಿಪ್ರಸಾದ್, ಶರತ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಚಿಕ್ಕಪ್ಪನ ಮನೆಯಂಗಳದಲ್ಲಿಯೇ ನಡೆದ ಈ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಶರತ್ ಕುಮಾರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು.

- Advertisement -
spot_img

Latest News

error: Content is protected !!