- Advertisement -
- Advertisement -
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ಸಂಭವಿಸಿದೆ. ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆಸಿಡ್ ದಾಳಿ ನಡೆದಿದ್ದು. ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್ ನಲ್ಲಿ ಈ ದುರ್ಘಟನೆ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ಎಂಬಾತ ಕೃತ್ಯವೆಸಗಿದ್ದಾನೆ.ಗಾಯಾಳು ಮತ್ತು ಆರೋಪಿ ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಕಳೆದ ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಆರೋಪಿ ಜನತಾ ಅದಕ್ ಸ್ನೇಹಿತನ ಡೈಲೂಟೇಡ್ ಸೆಲ್ಫುರಿಕ್ ಆ್ಯಸಿಡ್ ಎರಚಿದ್ದಾನೆ.
ಇದರಿಂದ ಆತನ ಮುಖ ಮತ್ತು ಎದೆಗೆ ಶೇಕಡಾ 30% ರಷ್ಟು ಗಾಯಗಳಾಗಿದೆ. ಆತನನ್ನು ವಿಕ್ಟೋರಿಯಾ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಆರೋಪಿ ಜನತಾ ಅದಕ್ ಅನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
- Advertisement -