Sunday, May 5, 2024
Homeಕರಾವಳಿಉಡುಪಿಕಾರ್ಕಳ: ಗೋಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಬೇಕು- ಪೊಲೀಸ್‌ ಅಧಿಕಾರಿಗಳಿಗೆ ವಿ. ಸುನಿಲ್‌ ಕುಮಾರ್‌...

ಕಾರ್ಕಳ: ಗೋಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಬೇಕು- ಪೊಲೀಸ್‌ ಅಧಿಕಾರಿಗಳಿಗೆ ವಿ. ಸುನಿಲ್‌ ಕುಮಾರ್‌ ಸೂಚನೆ

spot_img
- Advertisement -
- Advertisement -

ಕಾರ್ಕಳ: ಜಿಲ್ಲೆಯಲ್ಲಿ ಗೋಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಈ ಕೃತ್ಯ ನಡೆಸುವವರು, ಸಹಕರಿಸುವವರನ್ನು ಪತ್ತೆಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಅವರು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾತ್ರಿ ಪೊಲೀಸ್‌ ಗಸ್ತು ಹೆಚ್ಚಿಸಬೇಕು, ಚೆಕ್‌ಪೋಸ್ಟ್‌ ಗಳಲ್ಲಿ ನಿಗಾ ಇರಿಸಬೇಕು. ಈ ಹಿಂದೆ ಗೋಕಳ್ಳತನದಲ್ಲಿ ಭಾಗಿಯಾದವರನ್ನು ಠಾಣೆಗೆ ಕರೆಸಿ ತನಿಖೆ ನಡೆಸುವುದು, ಶಂಕಿತ ವ್ಯಕ್ತಿಗಳನ್ನು ತೀವ್ರ ತನಿಖೆಗೆ ಒಳಪಡಿಸಬೇಕು ಎಂದು ಸೂಚಿಸಿದರು.

ಇನ್ಮುಂದೆ ಜಿಲ್ಲೆಯಲ್ಲಿ ಗೋಕಳ್ಳತನದಂತಹ ಕೃತ್ಯ ಗಳು ನಡೆಯದಂತೆ ನಿಗಾವಹಿಸಬೇಕು. 15 ದಿನಗಳಲ್ಲಿ ಜಿಲ್ಲೆಯಲ್ಲಿ ಸಂಪೂರ್ಣ ಹತೋಟಿಗೆ ತರಬೇಕು ಎಂದು ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!