- Advertisement -
- Advertisement -
ಉಪ್ಪಿನಂಗಡಿ: ಕಾರು ಮತ್ತು ಆಕ್ಟಿವಾ ದ್ವಿಚಕ್ರ ವಾಹನ ಡಿಕ್ಕಿಯಾಗಿ, ದ್ವಿಚಕ್ರ ವಾಹನ ಸವಾರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೂಟೇಲು ಸೇತುವೆ ಬಳಿ ನಡೆದಿದೆ.
ಗಾಯಗೊಂಡಿರುವ ವ್ಯಕ್ತಿಯನ್ನು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಗಾಯಗೊಂಡಿರುವ ವ್ಯಕ್ತಿ ಉಪ್ಪಿನಂಗಡಿ ಮಠ ನಿವಾಸಿ ಇಯಾಸ್ ಎಂದು ಗುರುತಿಸಲಾಗಿದ್ದು, ಇವರು ಉಪ್ಪಿನಂಗಡಿಯಿಂದ ಮಠದ ಹೋಗುತ್ತಿದ್ದಾಗ ಇದರ ಎದುರಗಡೆಯಿಂದ ಹೋಗುತ್ತಿದ್ದ ಕಾರು ಬಲಗಡೆಗೆ ತಿರುಗಿದಾಗ ದ್ವಿಚಕ್ರ ವಾಹನ ಕಾರಿಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸುದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
- Advertisement -