ಹೈದರಾಬಾದ್: ಮೊನ್ನೆಯಷ್ಟೇ ನಟ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅದರ ಬೆನ್ನಲ್ಲೇ ಇದೀಗ ಅವರ ಗೆಳೆಯ ನಟ ಚಂದ್ರಕಾಂತ್ ನೇಣಿಗೆ ಶರಣಾಗಿದ್ದಾರೆ.
![](https://mahaxpress.com/wp-content/uploads/2024/05/Serial-Actor-Chandrakanth_V_jpg-442x260-4g.webp)
ಮೂಲತಃ ಮಂಡ್ಯದವರಾದ ಪವಿತ್ರಾ ಮೇ12 ರಂದು ಆಂಧ್ರದ ಕಾರು ಮಹೆಬೂಬ್ನಗರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದರು. ಈ ಅಪಘಾತದಲ್ಲಿ ಕಿರುತೆರೆ ನಟ ಚಂದ್ರಕಾಂತ್ ಕೂಡ ಗಾಯಗೊಂಡಿದ್ದರು. ಪವಿತ್ರಾ ಅವರ ಅಂತ್ಯಕ್ರಿಯೆಗೆ ಮಂಡ್ಯಗೆ ಗಾಯ ಆಗಿದ್ದರೂ ಚಂದು ಬಂದಿದ್ದರು. ಈ ವೇಳೆ ತನ್ನ ಸ್ನೇಹಿತೆಯನ್ನು ಕಳೆದುಕೊಂಡ ದುಃಖದಲ್ಲಿ ಭಾವುಕರಾಗಿ ಮಾತನಾಡಿದ್ದರು.
![](https://mahaxpress.com/wp-content/uploads/2024/05/chandu18052024_c-1024x576.jpg)
ಶುಕ್ರವಾರ ಹೈದರಾಬಾದ್ನ ಮಣಿಕೊಂಡದಲ್ಲಿರುವ ತನ್ನ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಚಂದ್ರಕಾಂತ್ ಹಾಗೂ ಪವಿತ್ರ ರಿಲೇಷನ್ ಶಿಫ್ ನಲ್ಲಿದ್ದರು ಎಂದು ಹೇಳಲಾಗಿದ್ದು, ಇದೇ ನೋವಿನಲ್ಲಿ ಚಂದ್ರಕಾಂತ್ ಆತ್ಮಹತ್ಯೆಗೆ ಶರಣಾಗಿರುವ ಸಾದ್ಯತೆ ಇದೆ ಎಂದು ಹೇಳಲಾಗಿದೆ. ತೆಲುಗಿನ ಅನೇಕ ಧಾರಾವಾಹಿಗಳಲ್ಲಿ ನಟಿಸಿರುವ ಇವರು, 2015 ರಲ್ಲಿ ಶಿಲ್ಪಾ ಎನ್ನುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಎರಡು ಮಕ್ಕಳಿದ್ದಾರೆ.