- Advertisement -
- Advertisement -
ಸಂಸ್ಥೆಯ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ನಟ ಕಿಶೋರ್ ಅವರ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಲಾಗಿದೆ.
ಆದರೆ ಯಾವ ಕಾರಣಕ್ಕೆ, ಯಾವ ಟ್ವೀಟ್ ಗಾಗಿ ಖಾತೆ ಅಮಾನತು ಮಾಡಲಾಗಿದೆ ಎನ್ನುವುದನ್ನು ಹೇಳಿ ಎಂದು ಅಭಿಮಾನಿಗಳು ಎಲಾನ್ ಮಸ್ಕ್ ಅವರನ್ನು ಟ್ಯಾಗ್ ಮಾಡಿ ಆಗ್ರಹಿಸುತ್ತಿದ್ದಾರೆ.
ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ ? ಎನ್ನುವ ಸಾಲುಗಳನ್ನು ಇತ್ತೀಚೆಗೆ ನಟ ಕಿಶೋರ್ ಅವರು ಬರೆದುಕೊಂಡಿದ್ದರು. ಬಹುಶಃ ಇದೇ ಕಾರಣಕ್ಕೆ ಈ ರೀತಿ ಆಗಿರಬಹುದು ಎಂದು ಕೆಲ ಫ್ಯಾನ್ಸ್ ಗಳು ಹೇಳುತ್ತಿದ್ದಾರೆ. ಈ ಬಗ್ಗೆ ಕಿಶೋರ್ ಅವರು ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಖಾತೆ ಅಮಾನತಿಗೆ ಕಾರಣಗಳು ತಿಳಿದು ಬಂದಿಲ್ಲ.
- Advertisement -