- Advertisement -
- Advertisement -
ನಿನ್ನೆ ಕೊಲ್ಲೂರು ಮುಕಾಂಬಿಕೆ ಸನ್ನಿಧಿಗೆ ಭೇಟಿ ಕೊಟ್ಟ ಸಿಎಂ ಜೊತೆ ನಟ ರಿಷಬ್ ಶೆಟ್ಟಿ ಕೂಡಾ ಕಾಣಿಸಿಕೊಂಡಿದ್ರು. ಹೀಗಾಗಿ ರಿಷಬ್ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದಾರಾ ಎಂದು ಚರ್ಚೆ ಕೂಡಾ ಹುಟ್ಟಿತು. ಅಲ್ಲದೇ ಮುಂದೆ ರಿಷಬ್ ಬಿಜೆಪಿ ಸ್ಟಾರ್ ಕ್ಯಾಂಪೇನರ್ ಆಗಬಹುದು ಎಂಬರ್ಥದಲ್ಲಿ ಸಿಎಂ ಸುಳಿವನ್ನೂ ಕೊಟ್ಟಿದ್ರು.
ಆದ್ರೆ ಇದೀಗ ಟ್ವಿಟ್ಟರ್ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ನಟ ರಿಷಬ್ ಶೆಟ್ಟಿ, ಕೊಲ್ಲೂರು ಮುಕಾಂಬಿಕೆ ದರ್ಶನಕ್ಕೆ ಹೋದಾಗ ಮಾನ್ಯ ಮುಖ್ಯಮಂತ್ರಿಗಳ ಭೇಟಿಯಾಯಿತು. ಇದಕ್ಕೆ ರಾಜಕೀಯದ ಬಣ್ಣ ಬೇಡ. ಕಾಂತಾರದ ಬರವಣಿಗೆಯಲ್ಲಿ ಸಂಪೂರ್ಣ ತೊಡಗಿ ಕೊಂಡಿದ್ದೇನೆ, ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಇರಲಿ.
- Advertisement -