- Advertisement -
- Advertisement -
ಬೆಂಗಳೂರು: ಮಂಡ್ಯ ಮೂಲದ ಕನ್ನಡ ಕಿರುತೆರೆ ನಟ ಸುಶೀಲ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
30 ವರ್ಷದ ಸುಶೀಲ್ ಗೌಡ ‘ಅಂತಃಪುರ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಫಿಟ್ನೆಸ್ ಬಗ್ಗೆ ಅಪಾರ ಕಾಳಜಿ ಹೊಂದಿರುವ ಸುಶೀಲ್, ಕಿರುತೆರೆ ಜತೆಗೆ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಬೇಕೆಂಬ ಕನಸು ಹೊತ್ತಿದ್ದರು. ಅದರಂತೆ, ದುನಿಯಾ ವಿಜಯ್ ನಾಯಕತ್ವ ಮತ್ತು ನಿರ್ದೇಶನದ ‘ಸಲಗ’ ಚಿತ್ರದಲ್ಲಿಯೂ ಪೊಲೀಸ್ ಪಾತ್ರ ನಿಭಾಯಿಸಿದ್ದರು.
ಮಂಡ್ಯದ ವಿವಿ ನಗರ ಬಡಾವಣೆ ನಿವಾಸಿಯಾಗಿರುವ ಸುಶೀಲ್, ಬೆಂಗಳೂರಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡ್ತಿದ್ದರು. ಕರೊನಾ ಲಾಕ್ಡೌನ್ನಿಂದಾಗಿ ಕಳೆದ ಮೂರು ತಿಂಗಳಿನಿಂದ ಜಿಮ್ ತೆರೆದಿರಲಿಲ್ಲ. ಈ ಒಂದು ನೋವು ಸುಶೀಲ್ಗೆ ಕಾಡುತ್ತಿತ್ತು ಎನ್ನಲಾಗಿದೆ.
ಸದ್ಯ ಸುಶೀಲ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನಟ ದುನಿಯಾ ವಿಜಯ್ ಸಹ ಅಗಲಿದ ನಟನಿಗೆ ಕಂಬನಿ ಮಿಡಿದಿದ್ದಾರೆ.
- Advertisement -