- Advertisement -
- Advertisement -
ಬೆಂಗಳೂರು : ನಿರ್ದೇಶಕನ ಮೇಲೆ ನಟನೊಬ್ಬ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್ ನಲ್ಲಿ ನಡೆದಿದೆ. ನಟ ತಾಂಡವ್ ರಾಮ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮುಗಿಲ್ ಪೇಟೆ ಸಿನಿಮಾ ನಿರ್ದೇಶಕ ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಾರೆ.
ಸಿನಿಮಾ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ಆರೋಪಿಸಿ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಸಿನಿಮಾ ನಟ ತಾಂಡವ್ ರಾಮ್ ನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೋಡಿಹಕ್ಕಿ, ಭೂಮಿಗೆ ಬಂದ ಭಗವಂತ ಧಾರಾವಾಹಿಯಲ್ಲಿ ತಾಂಡವ್ ರಾಮ್ ನಟಿಸಿದ್ದರು. ಸದ್ಯ ಕೊಲೆ ಯತ್ನ ಪ್ರಕರಣದಲ್ಲಿ ತಾಂಡವ್ ರಾಮ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ
- Advertisement -