- Advertisement -
- Advertisement -
ಬೆಂಗಳೂರು; ಅಕ್ಟೋಬರ್ 5 ರಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಡ್ತೀನಿ ಅಂತಾ ಹೇಳಿದ್ದ ಮೋಹಕ ತಾರೆ ರಮ್ಯಾ ಅಭಿಮಾನಿಗಳ ದಿಲ್ ಖುಷ್ ಆಗುವಂತಹ ಸುದ್ದಿಯನ್ನೇ ನೀಡಿದ್ದಾರೆ.
ರಮ್ಯಾ ಮತ್ತು ರಾಜ್ ಬಿ. ಶೆಟ್ಟಿ ಕಾಂಬಿನೇಷನ್ನ ಚಿತ್ರದಲ್ಲಿ ರಮ್ಯಾ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದ್ಹಾಗೆ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಶೀರ್ಷಿಕೆ ಇಡಲಾಗಿದೆ.
ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕಮ್ ಬ್ಯಾಕ್ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ ಈಗ ಶೀರ್ಷಿಕೆ ಅನೌನ್ಸ್ ಆಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್ ಇಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾವನ್ನು ರಾಜ್ ಬಿ. ಶೆಟ್ಟಿ ಅವರು ನಿರ್ದೇಶನ ಮಾಡಿದ್ದಾರೆ.
- Advertisement -