Monday, May 13, 2024
Homeತಾಜಾ ಸುದ್ದಿರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ

ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ

spot_img
- Advertisement -
- Advertisement -

ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿದ್ದಾರೆ . ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಗೆ ಮುಂದಾಗಿರುವ ಬೆನ್ನಲೇ ಈ ಬೆಳವಣಿಗೆ ನಡೆದಿರುವುದು ಅನೇಕ ಚರ್ಚೆಗೆ ಕಾರಣವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಕಳೆದುಕೊಂಡಿದೆ. ಇದು ಜನಾದೇಶ, ಇದನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಅಂತ ಅವರು ಹೇಳಿದ್ದಾರೆ.

 ಇದೇ ವೇಳೆ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ಎಲ್ಲರಿಗೆ ನನ್ನ ಹೃದಯಪೂರ್ವಕ ವಂದನೆಗಳನ್ನು ಸಲ್ಲಿಸುತ್ತೇನೆ’ ಎಂದು ಉಲ್ಲೇಖಿಸಿದ್ದಾರೆ.

- Advertisement -
spot_img

Latest News

error: Content is protected !!