- Advertisement -
- Advertisement -
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆಯಲ್ಲಿ ನಿನ್ನೆ ಕೆಎಸ್ಸಾರ್ಟಿಸಿ ಬಸ್ ಹಾಗೂ ಆಲ್ಟೊ ಕಾರು ನಡುವೆ ಸಂಭವಿಸಿದ ಅಪಘಾತದ ಗಾಯಾಳುಗಳ ಪೈಕಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕೊಕ್ಕಡ ಪಟ್ರಮೆ ನಿವಾಸಿ ಮರಿಯಮ್ಮ(59) ಮೃತಪಟ್ಟವರು. ನಿನ್ನೆ ಸಂಭವಿಸಿದ ಈ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಐದು ಮಂದಿ ಗಾಯಗೊಂಡಿದ್ದರು. ಈ ಪೈಕಿ ಮರಿಯಮ್ಮ ಗಂಭೀರ ಗಾಯಗೊಂಡಿದ್ದರು.
- Advertisement -