- Advertisement -
- Advertisement -
ಮಂಗಳೂರು: ಮಂಗಳೂರು ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ವೈ.ಕೆ. ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ವಲಯ ನಿರ್ದೇಶಕರಾಗಿ(ಪರಿಸರ) ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಈ ವರೆಗೆ ಉಡುಪಿ ವಲಯ ನಿರ್ದೇಶಕರಾಗಿದ್ದ ಐಎಫ್ಎಸ್ ಅಧಿಕಾರಿ ಶ್ರೀಪತಿ ಬಿ.ಎನ್. ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ದಿನೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ.ಡಾ. ದಿನೇಶ್ ಕುಮಾರ್ ಅವರು 2015 ನೇ ಬ್ಯಾಚ್ ನ ಐಎಫ್ ಎಸ್ ಅಧಿಕಾರಿಯಾಗಿದ್ದಾರೆ.
- Advertisement -