- Advertisement -
- Advertisement -
ಮಂಗಳೂರು;ಮಳಲಿ ಮಸೀದಿ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆಗಸ್ಟ್ 10ಕ್ಕೆ ಮುಂದೂಡಿದೆ.
ನ್ಯಾಯಾಲಯವು ವಾದ-ವಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಆದರೆ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರ ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಪ್ರಕರಣದ ತೀರ್ಪು ಆಗಸ್ಟ್ 10ಕ್ಕೆ ಮುಂದೂಡಲಾಗಿದೆ.
ಈ ಮೊದಲೇ ಹೈಕೋರ್ಟ್ ಈ ಕುರಿತು ಕೆಳಹಂತದ ನ್ಯಾಯಾಲಯ ವಿಚಾರಣೆ ಮಾತ್ರ ನಡೆಸಬೇಕು, ತೀರ್ಪು ನೀಡಬಾರದು ಎಂದು ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಜಾ ಬಳಿಕ ಇಂದಿಗೆ ತೀರ್ಪು ಕಾಯ್ದಿರಿಸಲಾಗಿತ್ತು.
- Advertisement -