Friday, June 27, 2025
Homeಕರಾವಳಿಉಡುಪಿಉಡುಪಿ: ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ವಕೀಲನಿಂದ ಧಮ್ಕಿ

ಉಡುಪಿ: ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ವಕೀಲನಿಂದ ಧಮ್ಕಿ

spot_img
- Advertisement -
- Advertisement -

ಉಡುಪಿ: ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ವಕೀಲರೊಬ್ಬರು ಧಮ್ಕಿ ಹಾಕಿದ ಘಟನೆ ಉಡುಪಿಯ ಕರಾವಳಿ ಜಂಕ್ಷನ್ ಫ್ಲೈ ಓವರ್ ಬಳಿ ನಡೆದಿದೆ.

ಉಡುಪಿ ಸಂಚಾರ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ದುಂಡಪ್ಪ ಮಾದವ(35) ಎಂಬವರು ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.‌ಇವರು ಬನ್ನಂಜೆ ಕಡೆಯಿಂದ ಅತ್ತ ಬರುತ್ತಿದ್ದ ವಾಹನವನ್ನು ಹ್ಯಾಂಡ್ ಸಿಗ್ನಲ್ ಮಾಡಿ ನಿಲ್ಲಿಸುತ್ತಿದ್ದರು. ಆಗ  ಸ್ಕೂಟರ್ ಸವಾರ ಕೆ. ರಾಜೇಂದ್ರ ಎಂಬಾತ ಯಾಕೆ ವಾಹನವನ್ನು ತಡೆದ್ರಿ. ನಾನು ಅಡ್ವೋಕೇಟ್. ನೀನು ಎಲ್ಲಿಂದಲೋ ಬಂದು ಇಲ್ಲಿ ಕರ್ತವ್ಯ ನಿರ್ವಹಿಸೋ ಅವಶ್ಯಕತೆಯಿಲ್ಲ. ನಮ್ಮ ಜಿಲ್ಲೆಯನ್ನು ನಾವೇ ನೋಡಿಕೊಳ್ಳುತ್ತೇವೆ ಎಂದು ಏಕವಚನದಲ್ಲಿ ಬೈದಿದ್ದಾರೆ. ಅಲ್ಲದೆ ಹಲ್ಲೆ ಕೂಡ ಮಾಡಿದ್ದಾರೆ.

ಈ ಬಗ್ಗೆ ದುಂಡಪ್ಪ ಅವರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!