ಹೈದರಾಬಾದ್: ಕಲ್ಲಂಗಡಿ ಹಣ್ಣು ತಿಂದ ಪರಿಣಾಮ ಇಬ್ಬರು ಬಾಲಕರು ಮೃತಪಟ್ಟ ಘಟನೆ ತೆಲಂಗಾಣದ ಪೆದ್ದಪಲ್ಲಿ ಎಂಬಲ್ಲಿ ನಡೆದಿದೆ. ಇನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಘಟನೆಯಲ್ಲಿ ಮೃತರಾದವರನ್ನು ದರವೇಣಿ ಸಿವಾನಂದು (12) ಮತ್ತು ಚರಣ್ (10) ಎಂದು ಗುರುತಿಸಲಾಗಿದೆ. ಮನೆಯ ಇತರೆ ಸದಸ್ಯರಾದ ಶ್ರೀಶೈಲಂ, ಗುಣವತಿ ಮತ್ತು ಅಜ್ಜಿ ಸರಮ್ಮಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಇನ್ನು ಈ ಅನಾಹುತಕ್ಕೆಲ್ಲಾ ಕಾರಣ ಇಲಿ ಅಂತಾ ಹೇಳಲಾಗಿದೆ. ಮನೆಯವರು ಇಲಿಯನ್ನು ಕೊಲ್ಲಲು ಇಲಿ ಪಾಶಾಣವನ್ನು ಮನೆಗೆ ತಂದಿದ್ದರು. ಅದರಲ್ಲಿ ಉಳಿದ ಇಲಿ ಪಾಷಾಣವನ್ನು ಒಂದು ಕಪ್ ಬೋರ್ಡ್ನಲ್ಲಿ ಇಟ್ಟಿದ್ದರು. ಇಲಿ ಮನೆಯಲ್ಲೇ ಓಡಾಡಿ ಪಾಶಾಣ ಸೇವಿಸಿ, ಅದೇ ಬಾಯಿಯಲ್ಲಿ ಮನೆಯಲ್ಲಿದ್ದ ಕಲ್ಲಂಗಡಿ ಹಣ್ಣನ್ನು ಸಹ ತಿಂದಿದೆ. ಇದನ್ನು ತಿಳಿಯದ ಮನೆಯವರು ಹಣ್ಣನ್ನು ತಿಂದು ಇಡೀ ಕುಟುಂಬ ಅನಾರೋಗ್ಯಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದಾರೆ.