Thursday, April 25, 2024
Homeತಾಜಾ ಸುದ್ದಿಕಲ್ಲಂಗಡಿ ತಿಂದು ಇಬ್ಬರು ಸಾವು, ಮೂವರ ಸ್ಥಿತಿ ಚಿಂತಾಜನಕ

ಕಲ್ಲಂಗಡಿ ತಿಂದು ಇಬ್ಬರು ಸಾವು, ಮೂವರ ಸ್ಥಿತಿ ಚಿಂತಾಜನಕ

spot_img
- Advertisement -
- Advertisement -

ಹೈದರಾಬಾದ್:  ಕಲ್ಲಂಗಡಿ ಹಣ್ಣು ತಿಂದ ಪರಿಣಾಮ ಇಬ್ಬರು ಬಾಲಕರು ಮೃತಪಟ್ಟ ಘಟನೆ ತೆಲಂಗಾಣದ ಪೆದ್ದಪಲ್ಲಿ ಎಂಬಲ್ಲಿ ನಡೆದಿದೆ. ಇನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

 ಘಟನೆಯಲ್ಲಿ ಮೃತರಾದವರನ್ನು ದರವೇಣಿ ಸಿವಾನಂದು (12) ಮತ್ತು ಚರಣ್​ (10) ಎಂದು ಗುರುತಿಸಲಾಗಿದೆ. ಮನೆಯ ಇತರೆ ಸದಸ್ಯರಾದ ಶ್ರೀಶೈಲಂ, ಗುಣವತಿ ಮತ್ತು ಅಜ್ಜಿ ಸರಮ್ಮಲ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

ಇನ್ನು ಈ ಅನಾಹುತಕ್ಕೆಲ್ಲಾ ಕಾರಣ ಇಲಿ ಅಂತಾ ಹೇಳಲಾಗಿದೆ. ಮನೆಯವರು ಇಲಿಯನ್ನು ಕೊಲ್ಲಲು ಇಲಿ ಪಾಶಾಣವನ್ನು ಮನೆಗೆ ತಂದಿದ್ದರು. ಅದರಲ್ಲಿ  ಉಳಿದ ಇಲಿ ಪಾಷಾಣವನ್ನು ಒಂದು ಕಪ್​ ಬೋರ್ಡ್​ನಲ್ಲಿ ಇಟ್ಟಿದ್ದರು. ಇಲಿ ಮನೆಯಲ್ಲೇ ಓಡಾಡಿ ಪಾಶಾಣ ಸೇವಿಸಿ, ಅದೇ ಬಾಯಿಯಲ್ಲಿ ಮನೆಯಲ್ಲಿದ್ದ ಕಲ್ಲಂಗಡಿ ಹಣ್ಣನ್ನು ಸಹ ತಿಂದಿದೆ. ಇದನ್ನು ತಿಳಿಯದ ಮನೆಯವರು ಹಣ್ಣನ್ನು ತಿಂದು ಇಡೀ ಕುಟುಂಬ ಅನಾರೋಗ್ಯಕ್ಕೀಡಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

- Advertisement -
spot_img

Latest News

error: Content is protected !!