- Advertisement -
![]()
- Advertisement -
ಬೆಳ್ತಂಗಡಿ : ಹೈಕೋರ್ಟ್ ನಲ್ಲಿ ಎಸ್.ಐ.ಟಿ ವಿಚಾರಣೆಗೆ ತಡೆಯಾಜ್ಞೆ ತೆರವು ಮಾಡಿದ ಬೆನ್ನಲ್ಲೇ ಷಡ್ಯಂತ್ರ ಮಾಡಿದ ಬುರುಡೆ ಗ್ಯಾಂಗ್ ಸೂತ್ರಧಾರಿಗಳಿಗೆ ವಿಚಾರಣೆಗೆ ಕರೆಯುವ ಸಾಧ್ಯತೆ ಹೆಚ್ಚಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡನನ್ನು ಬುರುಡೆ ಪ್ರಕರಣ ಸಂಬಂಧ ಷಡ್ಯಂತ್ರ ಮಾಡಿರುವ ಕಾರಣದಿಂದ ಯಾವುದೇ ಕ್ಷಣಗಳಲ್ಲಿ ಸೂತ್ರಧಾರಿಗಳನ್ನು ಬೆಳ್ತಂಗಡಿ ಎಸ್.ಐ.ಟಿ ಅಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಕರೆಯಲಿದ್ದಾರೆ.
ಬುರುಡೆ ಪ್ರಕರಣದಲ್ಲಿ ಷಡ್ಯಂತ್ರ ಮಾಡಿರುವ ವಿಚಾರದಲ್ಲಿ ಎಸ್.ಐ.ಟಿ ವಿಚಾರಣೆ ವೇಳೆ ತಪ್ಪೊಪ್ಪಿಗೆ ನೀಡಿದ್ದಲ್ಲಿ ಯಾವುದೇ ಸಮಯದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.
- Advertisement -


