- Advertisement -
- Advertisement -
ಬೆಂಗಳೂರು; ನಿನ್ನೆ ಸಿದ್ದರಾಮಯ್ಯ ಅವರು ಸಿಎಂ ಎಂದು ಫೈನಲ್ ಆಗುವ ಮೊದಲೇ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಲಾಗುತ್ತಿತ್ತು. ಬಳಿಕ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳುತ್ತಿದ್ದಂತೆ ಸಿದ್ಥತಾ ಕಾರ್ಯ ಅರ್ಧಕ್ಕೆ ಸ್ಥಗಿತವಾಗಿತ್ತು. ಇದೀಗ ಮತ್ತೆ ರಾಜ್ಯದ ನೂತನ ಸಿಎಂ, ಡಿಸಿಎಂ ಪ್ರಮಾಣವಚನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮತ್ತೆ ಸಕಲ ಸಿದ್ದತೆ ಆರಂಭವಾಗಿದೆ.
ಮೇ 20 ರಂದು ಪದಗ್ರಹಣ ಕಾರ್ಯಕ್ರಮ ನಡೆಯಲಿದೆ . ಈ ನಿಟ್ಟಿನಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ದತೆ ಆರಂಭವಾಗಿದೆ. ಕ್ರೀಡಾಂಗಣದ ಸುತ್ತಾ ಬ್ಯಾರಿಕೇಡ್ ಅಳವಡಿಸುತ್ತಿರುವ ಕಾರ್ಮಿಕರು ಕ್ರೀಡಾಂಗಣವನ್ನು ಸಜ್ಜುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
- Advertisement -