Friday, June 5, 2026
Homeಕರಾವಳಿಚಾರ್ಮಾಡಿ ಘಾಟಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ; ಒಂಟಿ ಸಲಗದ ಕಾಟಕ್ಕೆ ವಾಹನ ಸವಾರರು ಸುಸ್ತು

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ; ಒಂಟಿ ಸಲಗದ ಕಾಟಕ್ಕೆ ವಾಹನ ಸವಾರರು ಸುಸ್ತು

- Advertisement -
- Advertisement -

ಬೆಳ್ತಂಗಡಿ: ;ಚಾರ್ಮಾಡಿ ಘಾಟ್ ನಲ್ಲಿ ಕಳೆದ ಕೆಲವು ದಿನಗಳಿಂದ ಒಂಟಿ ಸಲಗದ ಕಾಟ ಜೋರಾಗಿದ್ದು ವಾಹನ ಸವಾರರು ಸುಸ್ತಾಗಿ ಹೋಗಿದ್ದಾರೆ. ನಿನ್ನೆ ಮತ್ತೆ ರಾತ್ರಿ ವೇಳೆ ಚಾರ್ಮಾಡಿ ಘಾಟ್ ನ 9ನೇ ತಿರುವಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ.

ಇದರಿಂದಾಗಿ ಪ್ರತಿ ದಿನ ವಾಹನ ಸವಾರರು ಭಯದಲ್ಲೇ ಓಡಾಡುವಂತಾಗಿದೆ.  ದೊಡ್ಡ-ದೊಡ್ಡ ವಾಹನಗಳಂತೂ ಮುಂದೆ ಸಾಗಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ದಿನದಿಂದ ನಿರಂತರವಾಗಿ ರಸ್ತೆಯಲ್ಲಿ ಕಾಣಿಸಿಕೊಳ್ತಾ ಇರೋ ಕಾಡಾನೆಯನ್ನು ಸ್ಥಳಾಂತರಿಸಲು ವಾಹನ ಸವಾರರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!