- Advertisement -
- Advertisement -
ಚೆನ್ನೈ:ತಮಿಳುನಾಡಿನ ಕೃಷಿ ಸಚಿವ ಆರ್ ದೊರೈಕಣ್ಣು(72) ನಿಧನರಾಗಿದ್ದಾರೆ. ಕೊರೊನಾ ವೈರಸ್ ಸೋಂಕಿಗೆಗೆ ಒಳಗಾಗಿದ್ದ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ಕೊನೆಯುಸಿರೆಳೆದರು. ಕಳೆದ ತಿಂಗಳು 13ರಂದು ಅನಾರೋಗ್ಯದ ಕಾರಣ ವಿಳ್ಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದ ಸಚಿವರಿಗೆ ಕೋವಿಡ್-19 ವೈರಸ್ ಸೋಂಕು ದೃಢಪಟ್ಟಿತ್ತು. ನಂತರ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಕೃಷಿ ಸಚಿವ ದೊರೈಕಣ್ಣು ಅವರು ನಿಧನರಾಗಿದ್ದು,ಮಂತ್ರಿಮಂಡಲದ ಸಹೋದ್ಯೋಗಿಗಳು ಸೇರಿದಂತೆ ಅನೇಕ ಗಣ್ಯರು ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
- Advertisement -