Monday, May 20, 2024
Homeಕರಾವಳಿಕಡಬ : ಹೊಳೆಗೆ ಬಿದ್ದು ಕೃಷಿಕ ಸಾವು

ಕಡಬ : ಹೊಳೆಗೆ ಬಿದ್ದು ಕೃಷಿಕ ಸಾವು

spot_img
- Advertisement -
- Advertisement -

ಕಡಬ : ಹೊಳೆನೀರಿಗೆ ಬಿದ್ದು ಕೃಷಿಕ ಸಾವನ್ನಪ್ಪಿರುವ ಘಟನೆ ಕಡಬ ಸಮೀಪದ  ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ.ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ(ಕಿಟ್ಟಣ್ಣ) ಮೃತ ದುರ್ದೈವಿ.

ಜು.9ರಂದು ಮಧ್ಯಾಹ್ನ ಇಚ್ಲಂಪಾಡಿಯ ಕೊಕ್ಕೊ ಕಾಡಿನ ಹೊಳೆಬದಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ.  ಈ ಹಿನ್ನೆಲೆಯಲ್ಲಿ ಮನೆಯವರು ಹೊಳೆಯಲ್ಲಿ ಹುಡುಕಾಟ ನಡೆಸಿದ್ದ ವೇಳೆ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ತನಕ ಹೊಳೆ ಬದಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರೆತಿರಲಿಲ್ಲ.

ಜು.10ರಂದು ಬೆಳಿಗ್ಗೆ ಹೊಳೆಬದಿ ಮತ್ತೆ ಹುಡುಕಾಟ ನಡೆಸಿದಾಗ  ಗುಂಡ್ಯಹೊಳೆ ಸೇರುವಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!