Wednesday, June 3, 2026
Homeಕರಾವಳಿಮಂಗಳೂರು:ಉಡುಪಿಯ ಕೊಲೆ ಪ್ರಕರಣದ ಆರೋಪಿಯನ್ನು ಕೆಲಸದಿಂದ ಅಮಾನತುಗೊಳಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್

ಮಂಗಳೂರು:ಉಡುಪಿಯ ಕೊಲೆ ಪ್ರಕರಣದ ಆರೋಪಿಯನ್ನು ಕೆಲಸದಿಂದ ಅಮಾನತುಗೊಳಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್

- Advertisement -
- Advertisement -

ಮಂಗಳೂರು: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಕೆಲಸದಿಂದ ಅಮಾನತುಗೊಳಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಎಕ್ಸ್ಪ್ರೆಸ್‌ನ ವಕ್ತಾರರು,ಘಟನೆಯಿಂದ ನಮಗೆ ತೀವ್ರ ದುಃಖವಾಗಿದೆ. ಮೃತರ ಸಂಬಂಧಿಗಳಿಗೆ ನಾವು ಬೆಂಬಲ ನೀಡುತ್ತೇವೆ ಮತ್ತು ತನಿಖೆಗೆ ಸಂಪೂರ್ಣವಾದ ಸಹಕಾರವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆಯಲ್ಲಿ ನಾವು ಆರೋಪಿಯನ್ನು ತಕ್ಷಣದಿಂದ ಜಾರಿಯಾಗುವಂತೆ ಕೆಲಸದಿಂದ ಅಮಾನತುಗೊಳಿಸಿರುವುದಾಗಿ ತಿಳಿಸಲಾಗಿದೆ.ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಪೊಲೀಸರು ಬಂಧಿಸಿದ್ದು, ಆತನಿಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.

- Advertisement -

Latest News

error: Content is protected !!