Saturday, May 11, 2024
Homeಕರಾವಳಿ500 ಕೋಟಿಗೂ ಅಧಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಆರೋಪಿ ಅಜಿತ್ ನನ್ನು ಸಿರವಾರಕ್ಕೆ ಗ್ರೇಡ್...

500 ಕೋಟಿಗೂ ಅಧಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಆರೋಪಿ ಅಜಿತ್ ನನ್ನು ಸಿರವಾರಕ್ಕೆ ಗ್ರೇಡ್ -2 ತಹಶೀಲ್ದಾರ್ ನೇಮಕ ಮಾಡಿ ಸರ್ಕಾರ ಆದೇಶ

spot_img
- Advertisement -
- Advertisement -

ಬೆಂಗಳೂರು: 500 ಕೋಟಿಗೂ ಅಧಿಕ ಅಕ್ರಮ ಆಸ್ತಿ ಗಳಿಕೆ ಆರೋಪ ಹೊತ್ತಿರುವ ಬೆಂಗಳೂರಿನ ಕೆಆರ್ ಪುರ ತಹಶೀಲ್ದಾರ್ ಗೆ ಅಜಿತ್ ಕುಮಾರ್ ರೈ ಅವರಿಗೆ ಹಿಂಭಡ್ತಿ ನೀಡಿ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಗ್ರೇಡ್ -2 ತಹಶೀಲ್ದಾರ್ ಹುದ್ದೆಗೆ ಸರ್ಕಾರ ನೇಮಕ ಮಾಡಿದೆ .

ಆದಾಯಕ್ಕಿಂತ ಭಾರಿ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಅಜಿತ್ ರೈ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ. ಸಿರವಾರದಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ ಪರಶುರಾಮ 500 ರೂಪಾಯಿ ಲಂಚ ಸ್ವೀಕಾರ ಆರೋಪದಡಿ ಲೋಕಾಯುಕ್ತ ದಾಳಿಗೆ ಸಿಲುಕಿ ಸೇವೆಯಿಂದ ಅಮಾನತುಗೊಂಡಿದ್ದಾರೆ.

ಅವರ ಸ್ಥಾನಕ್ಕೆ ಅಜಿತ್ ರೈ ಅವರಿಗೆ ಹಿಂಬಡ್ತಿ ನೀಡಿ ಸರ್ಕಾರ ವರ್ಗಾವಣೆ ಮಾಡಿದೆ. ಹಿಂದುಳಿದ ರಾಯಚೂರು ಜಿಲ್ಲೆಯ ಸಿರಿವಾರಕ್ಕೆ ಭ್ರಷ್ಟಾಚಾರ ಆರೋಪ ಹೊತ್ತಿರುವ ಅಜಿತ್ ರೈ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ. ಅವರನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.ಸರ್ಕಾರದ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

- Advertisement -
spot_img

Latest News

error: Content is protected !!