- Advertisement -
- Advertisement -
ಬೆಂಗಳೂರು: ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ವೇಳೆ ಸಿಎಂ ಈ ಸ್ಪಷ್ಟೀಕರಣ ನೀಡಿದ್ದಾರೆ.
ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
- Advertisement -