ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದ ಹಾಡುಗಳು ಕೂಡ ಜನಮನ ಗೆದ್ದಿವೆ. ಅದರಲ್ಲೂ ‘ವರಾಹ ರೂಪಂ..’ ಗೀತೆಯನ್ನು ಕೇಳಿ ಜನರು ತಲೆದೂಗಿದ್ದಾರೆ. ಆದರೆ ಈ ಹಾಡಿನ ಮೇಲೆ ಕೃತಿಚೌರ್ಯದ ಆರೋಪ ಕೇಳಿಬಂದಿದೆ.
ಹೌದು ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಹಾಗಾಗಿ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್’ ತಂಡದವರು ಕೇಸ್ ಹಾಕಲು ನಿರ್ಧರಿಸಿದ್ದಾರೆ.
ನಾವು ನಮ್ಮ ಕೇಳುಗರಿಗೆ ತಿಳಿಸುವುದೇನೆಂದರೆ, ಯಾವುದೇ ರೀತಿಯಲ್ಲೂ ‘ತೈಕ್ಕುಡಂ ಬ್ರಿಡ್ಜ್’ ತಂಡವು ‘ಕಾಂತಾರ’ ಸಿನಿಮಾ ಜೊತೆ ಸಹಯೋಗ ಹೊಂದಿಲ್ಲ. ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್ ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ನಾವು ಕಾನೂನಿನ ಕ್ರಮಕ್ಕೆ ಒತ್ತಾಯಿಸುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್’ ತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.