- Advertisement -
- Advertisement -
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟರ ವಿರುದ್ಧ ಸಮರ ಸಾರಿರುವ ಎಸಿಬಿ ಅಧಿಕಾರಿಗಳು ರಾಜ್ಯದ 60 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ15 ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
15 ಅಧಿಕಾರಿಗಳ ಮೇಲೆ ನಿರಂತರ ದೂರು ಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ. 8 ಜನ ಎಸ್ಪಿಗಳು, 100 ಮಂದಿ ಅಧಿಕಾರಿಗಳು, 300 ಸಿಬ್ಬಂದಿ ಸೇರಿ ಒಟ್ಟು 408 ಮಂದಿ ದಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಮನೆ ಮೇಲೆ ದಾಳಿ ಮಾಡಲಾಗಿದೆ. ನಾಗರಾಜ್, ಸಕಾಲ ಕೆಎಎಸ್ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ರಾಜಶೇಖರ, ಫಿಜಿಯೋಥೆರಪಿಸ್ಟ್, ಯಲಹಂಕ ಸರ್ಕಾರಿ ಆಸ್ಪತ್ರೆ ಮತ್ತು ಬಿಬಿಎಂಪಿ ಸಿಬ್ಬಂದಿಯಾದ ಬಾಗಲಗುಂಟೆಯ ಗಿರಿ, ಮಾಯಣ್ಣ ಸೇರಿದಂತೆ ಒಟ್ಟು ನಾಲ್ವರ ಮನೆ ಮೇಲೆ ರೇಡ್ ಆಗಿದೆ.
ಎಸಿಬಿ ದಾಳಿಗೆ ತುತ್ತಾದ ಸರ್ಕಾರಿ ಅಧಿಕಾರಿಗಳು
- ಕೆ.ಎಸ್ ಲಿಂಗೇಗೌಡ, ಎಕ್ಸಿಕ್ಯೂಟಿವ್ ಇಂಜಿನಿಯರ್ ಸ್ಮಾರ್ಟ್ ಸಿಟಿ ಯೋಜನೆ ಮಂಗಳೂರು
- ಶ್ರೀನಿವಾಸ್ ಕೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಎಲ್.ಬಿ.ಸಿ ಮಂಡ್ಯ
- ಲಕ್ಷ್ಮಿಕಾಂತಯ್ಯ, ರೆವಿನ್ಯೂ ಇನ್ಸ್ಪೆಕ್ಟರ್ ದೊಡ್ಡಬಳ್ಳಾಪುರ.
- ವಾಸುದೇವ್, ಪ್ರಾಜೆಕ್ಟ್ ಮ್ಯಾನೇಜರ್ ನಿರ್ಮಿತಿ ಕೇಂದ್ರ ಬೆಂಗಳೂರು.
- ಬಿ.ಕೃಷ್ಣಾರೆಡ್ಡಿ, ಜನರಲ್ ಮ್ಯಾನೇಜರ್, ನಂದಿನಿ ಡೈರಿ ಬೆಂಗಳೂರು.
- ಟಿ.ಎಸ್.ರುದ್ರೇಶಪ್ಪ, ಜಾಯಿಂಟ್ ಡೈರೆಕ್ಟರ್, ಅಗ್ರಿಕಲ್ಚರ್ ಡಿಪಾರ್ಟ್ಮೆಂಟ್ ಗದಗ
- ಎ.ಕೆ.ಮಸ್ತಿ, ಕೋ ಆಪರೇಟಿವ್ ಡೆವಲಪ್ಮೆಂಟ್ ಆಫೀಸರ್, ಸವದತ್ತಿ ಡೆಪ್ಯೂಟೇಷನ್, ಬೈಲಹೊಂಗಲ
- ಸದಾಶಿವ ಮರಲಿಂಗಣ್ಣನವರ್, ಸೀನಿಯರ್ ಮೋಟಾರ್ ಇನ್ಸ್ಪೆಕ್ಟರ್ ಗೋಕಾಕ್
- ನಾತಾಜೀ ಹೀರಾಜಿ ಪಾಟೀಲ್, ಗ್ರೂಪ್ ಸಿ ಬೆಳಗಾಂ ಹೆಸ್ಕಾಂ
- ಕೆ.ಎಸ್.ಶಿವಾನಂದ್, ರಿಟೈರ್ಡ್ ಸಬ್ ರಿಜಿಸ್ಟರ್, ಬಳ್ಳಾರಿ
- ರಾಜಶೇಖರ್, ಫಿಜಿಯೋಥೆರಪಿಸ್ಟ್, ಯಲಹಂಕ ಸರ್ಕಾರಿ ಆಸ್ಪತ್ರೆ
- ಮಾಯಣ್ಣ.ಎಂ, ಎಫ್.ಡಿ.ಸಿ ಬಿಬಿಎಂಪಿ ಬೆಂಗಳೂರು ರೋಡ್ಸ್ &ಇನ್ಫ್ರಾಸ್ಟ್ರಕ್ಚರ್
- ಎಲ್.ಸಿ.ನಾಗರಾಜ್, ಸಕಾಲ, ಅಡ್ಮಿನಿಸ್ಟ್ರೇಷನ್ ಆಫಿಸರ್, ಬೆಂಗಳೂರು
- ಜಿ.ವಿ.ಗಿರಿ, ಡಿ ಗ್ರೂಪ್ ಸಿಬ್ಬಂದಿ ಬಿಬಿಎಂಪಿ ಯಶವಂತಪುರ
- ಎಸ್.ಎಂ.ಬಿರಾದಾರ್, ಜಾಯಿಂಟ್ ಎಂಜಿನಿಯರ್ ಲೋಕೋಪಯೋಗಿ ಇಲಾಖೆ, ಜೇವರ್ಗಿ.
- Advertisement -