- Advertisement -
- Advertisement -
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹೆಸರು ಇಡಲಾಗಿದೆ. ಇಂದು ಸಿಎಂ ಬೊಮ್ಮಾಯಿ ನಟ ಅಂಬರೀಶ್ ಹೆಸರಿನ ನಾಮಫಲಕ ಉದ್ಘಾಟಿಸಿದರು.ಶಿವಾಜಿನಗರ ಕ್ಷೇತ್ರಕ್ಕೆ ಒಳಪಡುವ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ.
ಇನ್ನೂ, ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ತಲೆಯೆತ್ತಿದ್ದು, ಸ್ಮಾರಕವನ್ನು ಇಂದು ಸಿಎಂ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.ಈ ವೇಳೆ ಸುಮಲತಾ ಅಂಬರೀಷ್, ಸಿಎಂ ಬೊಮ್ಮಾಯಿ, ನಟ ರಾಘವೇಂದ್ರ ರಾಜ್ ಕುಮಾರ್, ಭಾಮಾ ಹರೀಶ್ ಮತ್ತಿತರರಿದ್ದರು.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು
- Advertisement -