- Advertisement -
- Advertisement -
ಮಣಿಪಾಲ: ಅನ್ಯ ಧರ್ಮದ ಯುವತಿಯೊಂದಿಗೆ ತಿರುಗಾಡುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆದಿದೆ.
ಸಾಲಿಗ್ರಾಮದ ಅಲ್ತಾಫ್ ಹಾಗೂ ಆತನ ನೆರೆಮನೆಯ ಬಾಲಕಿ ಮಣಿಪಾಲದ ಮಣ್ಣಪಳ್ಳ ಕೆರೆಗೆ ಬಂದಿದ್ದರು. ವಿವಿಧ ಧರ್ಮಕ್ಕೆ ಸೇರಿದ ಹುಡುಗ ಮತ್ತು ಹುಡುಗಿಯನ್ನು ಗಮನಿಸಿದ ಬಜರಂಗದಳ ಕಾರ್ಯಕರ್ತರು ಬಾಲಕನಿಗೆ ಅಡ್ಡಿಪಡಿಸಿ ಹಲ್ಲೆ ನಡೆಸಿದ್ದಾರೆ.
ಪ್ರಾಣೇಶ್, ವಿನುತ್ ಪೂಜಾರಿ ಮತ್ತು ಸಂಜಯ್ ಕುಮಾರ್ ಅಲ್ತಾಫ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳೆಂದು ಗುರುತಿಸಲಾಗಿದೆ.
ಈ ಸಂಬಂಧ ಅಲ್ತಾಫ್ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
- Advertisement -