- Advertisement -
- Advertisement -
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಇಂದಿನಿಂದ ದತ್ತ ಜಯಂತಿಗೆ ಚಾಲನೆ ನೀಡಿದ್ದು, ಮೊದಲ ದಿನವಾದ ಇಂದು ಅನುಸೂಯ ಜಯಂತಿ ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ದತ್ತಪೀಠಕ್ಕೆ ತೆರಳಿ ಅನುಸೂಯ ದೇವಿಯ ದರ್ಶನವನ್ನು ಮಹಿಳೆಯರು ಪಡೆಯಲು ಸಿದ್ಧರಾಗಿದ್ದರು. ಈ ವೇಳೆ ಚಿಕ್ಕಮಗಳೂರು ತಾಲೂಕಿನ ದತ್ತಪೀಠ ರಸ್ತೆಯಲ್ಲಿರುವ ಕೈಮಾರ ಚೆಕ್ ಪೋಸ್ಟ್ನಿಂದ ದತ್ತಪೀಠದ ರಸ್ತೆಯ ಉದ್ದಕ್ಕೂ ಮೊಳೆಗಳನ್ನು ಹಾಕಿರುವುದು ಕಂಡುಬಂದಿದೆ. ರಸ್ತೆಯಲ್ಲಿ ಮೊಳೆಗಳನ್ನು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -