- Advertisement -
- Advertisement -
ಬೆಳ್ತಂಗಡಿ : ಮೇಲ್ದರ್ಜೆಗೇರಿಸಲಾದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಇನ್ಸ್ಪೆಕ್ಟರ್ ಅಗಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ ಆನಂದ್.ಎಸ್ ಅವರನ್ನು ನೇಮಕ ಮಾಡಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಮೊದಲು ಸರ್ಕಲ್ ಇನ್ಸ್ಪೆಕ್ಟರ್ ವ್ಯಾಪ್ತಿಯಲ್ಲಿ ಇದ್ದು ಇದೀಗ ಅದನ್ನು ಪಿಐ ಪೊಲೀಸ್ ಠಾಣೆಯಾಗಿ ಸರಕಾರ ಮೇಲ್ದರ್ಜೆಗೇರಿಸಿತ್ತು.
ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಪಿಐ ಉಸ್ತುವಾರಿಯಾಗಿ ಇನ್ಸ್ಪೆಕ್ಟರ್ ಆನಂದ್.ಎಸ್ ಕರ್ತವ್ಯ ನಿರ್ವಹಿಸಲಿದ್ದಾರೆ. ಉಳಿದ ಧರ್ಮಸ್ಥಳ , ವೇಣೂರು, ಪುಂಜಾಲಕಟ್ಟೆ ಪೊಲೀಸ್ ಠಾಣೆ ಸರ್ಕಲ್ ವ್ಯಾಪ್ತಿಯಾಗಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಕರ್ತವ್ಯ ನಿರ್ವಹಿಸಲಿದ್ದಾರೆ.
- Advertisement -