Friday, April 19, 2024
Homeಕರಾವಳಿಮಂಗಳೂರು: ಹರಸಾಹಸಪಟ್ಟು ಬೆಕ್ಕನ್ನು ರಕ್ಷಿಸಿದ ಪ್ರಾಣಿಪ್ರಿಯೆ ರಜನಿ ಶೆಟ್ಟಿ

ಮಂಗಳೂರು: ಹರಸಾಹಸಪಟ್ಟು ಬೆಕ್ಕನ್ನು ರಕ್ಷಿಸಿದ ಪ್ರಾಣಿಪ್ರಿಯೆ ರಜನಿ ಶೆಟ್ಟಿ

spot_img
- Advertisement -
- Advertisement -

ಮಂಗಳೂರು: ಆಪತ್ತಿನಲ್ಲಿರುವ ಮೂಕ ಪ್ರಾಣಿಗಳ ಪಾಲಿಗೆ ತಾಯಿಯಾಗಿರುವ ಮಂಗಳೂರಿನ ಪ್ರಾಣಿಪ್ರಿಯೆ ರಜನಿ ಶೆಟ್ಟಿ ಎಂಬುವವರು ಹರಸಾಹಸಪಟ್ಟು ಪರ್ಶಿಯನ್ ಬೆಕ್ಕೊಂದನ್ನು ರಕ್ಷಿಸಿ ಸುದ್ದಿಯಾಗಿದ್ದಾರೆ.

ಮಂಗಳೂರು ನಗರದ ಕೊಡಿಯಾಲಬೈಲ್ ನಲ್ಲಿರುವ ಎಂಪಾಯರ್ ಮಾಲ್ ಹಿಂಭಾಗದ ಅಪಾರ್ಟ್‌ಮೆಂಟೊಂದರಲ್ಲಿ ಬೆಕ್ಕೊಂದು ಏಳನೇ ಮಹಡಿಯಿಂದ ನಾಲ್ಕನೇ ಮಹಡಿಯ ಬಾಲ್ಕನಿಗೆ ಬಿದ್ದು ಹೊರಬರಲಾಗದೇ ಸಿಲುಕಿಕೊಂಡಿತ್ತು, ಈ ಅಪಾರ್ಟ್‌ಮೆಂಟ್ ವಾಸಿಯಾಗಿರುವ ಕುಟುಂಬ ಪರ್ಶಿಯನ್ ತಳಿಯ ಬೆಕ್ಕೊಂದನ್ನು ಸಾಕಿದ್ದರು. ಆದರೆ ಮನೆಯವರು ನಿತ್ಯವೂ ಮನೆ ಬಾಗಿಲು ಹಾಕಿ ಕೆಲಸಕ್ಕೆ ಹೋಗುವಂತೆ ಶನಿವಾರವೂ ಹೋಗಿದ್ದಾರೆ.

ಆದರೆ ಅದೇನಾಯ್ತಿ ಬೆಕ್ಕು ಹೊರ ಬಂದು ಏಳನೇ ಮಹಡಿಯಿಂದ ನಾಲ್ಕನೇ ಮಹಡಿಯ ಬಾಲ್ಕನಿಗೆ ಬಿದ್ದು ಸಿಕ್ಕಿಹಾಕಿಕೊಂಡಿತ್ತು. ರಾತ್ರಿ ಮನೆಯವರು ಬಂದಾಗಲೇ – ಬೆಕ್ಕು ಮಿಸ್ಸಿಂಗ್ ಆಗಿರೋದು ಅವರಿಗೆ ತಿಳಿದಿದೆ.
ಆದ್ದರಿಂದ ಹುಡುಕಾಡಿದಾಗ ಬೆಕ್ಕು ನಾಲ್ಕನೇ ಮಹಡಿಯ ಬಾಲ್ಕನಿಯಲ್ಲಿ ಸಿಲುಕಿಕೊಂಡಿರುವುದು ಗೊತ್ತಾಗಿದೆ. ತಕ್ಷಣ ಮನೆಯವರು ರಜನಿ ಶೆಟ್ಟಿಯವರನ್ನು ಸಂಪರ್ಕಿಸಿದ್ದಾರೆ. ಮರುದಿನ ಬೆಳಗ್ಗೆ ಅವರು ಅಲ್ಲಿಗೆ ಹೋಗಿದ್ದಾರೆ.

ಆದರೆ ಬಾಲ್ಕನಿಯಲ್ಲಿ ಸಿಲುಕಿಕೊಂಡ ಬೆಕ್ಕನ್ನು ರಕ್ಷಿಸುವುದು ಸುಲಭದ ಮಾತಾಗಿರಲಿಲ್ಲ. ಆದ್ದರಿಂದ ರಜನಿ ಶೆಟ್ಟಿಯವರು ಸೊಂಟಕ್ಕೆ ಹಗ್ಗ ಕಟ್ಟಿ ಏಳನೇ ಮಹಡಿಯಿಂದ ನಾಲ್ಕನೇ ಮಹಡಿಯ ಗ್ಯಾಲರಿಗೆ ಇಳಿದು ಹರಸಾಹಸಪಟ್ಟು ಬೆಕ್ಕನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಿದ್ದಾರೆ.


ರಜನಿ ಶೆಟ್ಟಿಯವರು ಈ ಹಿಂದೆಯೂ ಬಾವಿಗೆ ಬಿದ್ದಿರುವ, ತೊಂದರೆಗೆ ಸಿಲುಕಿರುವ ನಾಯಿ, ಬೆಕ್ಕು ಸೇರಿದಂತೆ ಇನ್ನಿತರ ಮೂಕ ಪ್ರಾಣಿಗಳನ್ನು ರಕ್ಷಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು.

- Advertisement -
spot_img

Latest News

error: Content is protected !!