- Advertisement -
- Advertisement -
ಪುಣೆ:ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಇಂದು ನಡೆಯುತ್ತಿರುವ ಭಾರತ ಬಂದ್ ಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಬೆಂಬಲ ನೀಡಿದ್ದಾರೆ. ಅವರು ಇಂದು ಉಪವಾಸ ಸತ್ಯಾಗ್ರಹ ಮೂಲಕ ರೈತರ ಪರವಾಗಿ ನಿಲ್ಲಲಿದ್ದಾರೆ.
ಅಣ್ಣಾ ಹಜಾರೆ ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ರಾಳೆಗಾಂವ್ ಸಿದ್ಧಿ ಗ್ರಾಮದಲ್ಲಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಅವರು ಮಾತನಾಡಿ ಇಂದು ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು. ರೈತರ ಹಿತಾಸಕ್ತಿಗಾಗಿ ಕೆಲಸ ಮಾಡಲು ಸರ್ಕಾರದ ಮೇಲೆ ಒತ್ತಡ ತರುವಂತಹ ವಾತಾವರಣವನ್ನು ಈ ಆಂದೋಲನ ಸೃಷ್ಟಿಸಬೇಕು.ಎಂದು ಮನವಿ ಮಾಡಿದ್ದಾರೆ.
- Advertisement -