- Advertisement -
- Advertisement -
ಪುಣೆ: ರೈತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ತಮ್ಮ ಬೇಡಿಕೆಯನ್ನು ಮುಂದಿನ ಜನವರಿ ಒಳಗಾಗಿ ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಹೋರಾಟವು ತಮ್ಮ ‘ಅಂತಿಮ ಹೋರಾಟ’ವಾಗಲಿದೆ ಎಂದು ಅವರು ತಿಳಿಸಿದ್ದು ಸರ್ಕಾರ ಕೃಷಿಕರಿಗಾಗಿ ಏನೂ ಮಾಡಿಲ್ಲ ಇದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು.
ನಾನು ಈಗಾಗಲೇ ಇಟ್ಟಿರುವ ಬೇಡಿಕೆಗೆ ಒಂದು ತಿಂಗಳ ಸಮಯ ಕೋರಿದ್ದಾರೆ. ಹಾಗಾಗಿ ನಾನು ಜನವರಿ ಅಂತ್ಯದವರೆಗೆ ಅವರಿಗೆ ಸಮಯ ನೀಡಿದ್ದೇನೆ. ನನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ, ನಾನು ಉಪವಾಸ ಸತ್ಯಾಗ್ರಹವನ್ನು ಪುನರಾರಂಭಿಸುತ್ತೇನೆ. ಇದು ನನ್ನ ಅಂತಿಮ ಹೋರಾಟ ವಾದರೂ ಸರಿ ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಹೇಳಿದ್ದಾರೆ.
- Advertisement -