Friday, June 27, 2025
Homeಕರಾವಳಿಒಂದೇ ತಿಂಗಳಲಿನಲ್ಲಿ ಸವಣಾಲಿನಲ್ಲಿ ಎರಡು ಚಿರತೆಗಳು ಬೋನಿನೊಳಗೆ ಸೆರೆ; ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ

ಒಂದೇ ತಿಂಗಳಲಿನಲ್ಲಿ ಸವಣಾಲಿನಲ್ಲಿ ಎರಡು ಚಿರತೆಗಳು ಬೋನಿನೊಳಗೆ ಸೆರೆ; ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ

spot_img
- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಸವಣಾಲು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದಂತಹ ಬೋನಿನೊಳಗೆ ಒಂದೇ ತಿಂಗಳಲ್ಲಿ ಮತ್ತೊಂದು ಚಿರತೆ  ಬಿದ್ದಿದೆ.

ಅರಣ್ಯ ಇಲಾಖೆಯಿಂದ ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆ ಬಳಿ ಇರಿಸಲಾಗಿದ್ದ ಬೋನಿನೊಳಗೆ ಕಳೆದ ಮಧ್ಯರಾತ್ರಿ ಚಿರತೆ ಸೆರೆಯಾಗಿದೆ.

ಗುರಿಕಂಡ ಪರಿಸರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಚಿರತೆ ಹಾವಳಿಯಿಂದ ಕೋಳಿ, ಸೇರಿದಂತೆ ಸಾಕು ಪ್ರ್ರಾಣಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮನೆಯವರು ಮಾಹಿತಿ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯ ಅಧಿಕಾರಿಗಳು ಸುತ್ತಮುತ್ತಲಿನ ಪರಿಸರವನ್ನು ಪರಿಶೀಲಿಸಿ ಚಿರತೆಯನ್ನು ಸೆರೆ ಹಿಡಿಯುವುದಕ್ಕಾಗಿ ಬೋನ್ ಅಳವಡಿಸಿದ್ದರು. ಸುಮಾರು 3 ತಿಂಗಳ ನಂತರ ಸೆಪ್ಟೆಂಬರ್ 1 ರ ಮಧ್ಯರಾತ್ರಿ  ಚಿರತೆ ಈ ಬೋನಿನೊಳಗೆ ಸೆರೆಯಾಗಿತ್ತು. ಅದನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಗಿತ್ತು. ಆದರೆ ಇದೀಗ ಮತ್ತೇ ಒಂದೇ ವಾರದೊಳಗೆ ಮತ್ತೊಂದು ಚಿರತೆ ಈ ಪರಿಸರದಲ್ಲಿ ಸುತ್ತಾಡಿದ್ದಲ್ಲದೇ ಮನೆಯ ಕೋಳಿಯನ್ನು ಹಿಡಿದಿತ್ತು. ಈ ಬಗ್ಗೆ ಆತಂಕಕ್ಕೆ ಒಳಗಾಗಿದ್ದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಚಿರತೆ ಸೆರೆ ಹಿಡಿಯುವಂತೆ ಮನವಿ‌ ಮಾಡಿಕೊಂಡಿದ್ದರು.

ಅರಣ್ಯ ಇಲಾಖೆಯು ಅದರಂತೆಯೇ ಮತ್ತೆ ಕಳೆದ ವಾರ ಸವಣಾಲು ಪರಿಸರದಲ್ಲಿ ಬೋನ್ ಅನ್ನು ಅಳವಡಿಸಿದ್ದರು. ಈ ಬೋನಿನೊಳಗೆ ಚಿರತೆಯು ಸೆ 20ರ ಶುಕ್ರವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ಸೆರೆಯಾಗಿದೆ.

ಈ ಕುರಿತಂತೆ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಒಂದೇ ತಿಂಗಳಲಿನಲ್ಲಿ ಸವಣಾಲು ಪರಿಸರದಲ್ಲಿ ಎರಡು ಚಿರತೆಗಳು ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಂತಾಗಿದೆ.

- Advertisement -
spot_img

Latest News

error: Content is protected !!